
ನವದೆಹಲಿ: ಕೊರೋನಾ ಮಹಾಮಾರಿ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿದ್ದ ಅಂತಾರಾಷ್ಟ್ರೀಯ ವಿಮಾನ ಯಾನ ಸೇವೆ ನಿರ್ಬಂಧವನ್ನು ವಿಸ್ತರಿಸಲಾಗಿದೆ. ಆಗಸ್ಟ್ 31ರ ತನಕ ನಿರ್ಬಂಧ ಮುಂದುವರಿಸಿ ಕೇಂದ್ರ ನಾಗರಿಕ ವಿಮಾನ ಯಾನ ಇಲಾಖೆ ಆದೇಶ ಹೊರಡಿಸಿದ್ದಾರೆ .
ವಿಶೇಷ ವಿಮಾನಗಳಿಗೆ ಮಾತ್ರ ಅನುಮತಿ ನೀಡಲಾಗುವುದು. ವಂದೇ ಭಾರತ್ ಮತ್ತು ಏರ್ ಬಬಲ್ ಒಪ್ಪಂದದ ಅಡಿಯಲ್ಲಿ ಕೆಲವು ಆಯ್ಜ ರಾಷ್ಟ್ರಗಳಿಗೆ ಮಾತ್ರ ವಿಮಾನ ಯಾನಕ್ಕೆ ಭಾರತ ಅವಕಾಶ ಕಲ್ಪಿಸಿದೆ.
ಕೊರೋನಾ ಮೂರನೆ ಅಲೆ ಭೀತಿ ಪರಿಗಣಿಸಿ ಕೇಂದ್ರ ಸರ್ಕಾರ ಈ ತೀರ್ಮಾನಕ್ಕೆ ಬಂದಿದೆ ಎಂದು ವರದಿಯಾಗಿದೆ