
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಗೆ ಬರುವ ಸಾರ್ವಜನಿಕರು ಮೊಬೈಲ್ ನೊಂದಿಗೆ ಸಿಎಂ ನಿವಾಸಕ್ಕೆ ಬರುವಂತಿಲ್ಲ ಎಂದು ಬೊಮ್ಮಾಯಿ ಅವರ ಆರ್.ಟಿ.ನಗರ ಮನೆಯ ಹೊರಭಾಗದಲ್ಲಿ ಬೋರ್ಡ್ ಹಾಕಲಾಗಿದೆ.
ಸಿಎಂ ಬಸವರಾಜ ಬೊಮ್ಮಾಯಿ ಅವರ ನಿವಾಸದಲ್ಲಿ ಈ ಸಂಬಂಧ ಅಧಿಕೃತವಾಗಿ ಬೋರ್ಡ್ ಹಾಕಲಾಗಿದ್ದು, ಇನ್ಮುಂದೆ ಸಿಎಂ ಭೇಟಿಗೆ ಬರುವ ಸಾರ್ವಜನಿಕರು ಮೊಬೈಲ್ ನೊಂದಿಗೆ ಸಿಎಂ ನಿವಾಸಕ್ಕೆ ಬರುವಂತಿಲ್ಲ ಎಂದು ಬೊಮ್ಮಾಯಿ ಅವರ ಆರ್.ಟಿ.ನಗರ ಮನೆಯ ಹೊರಭಾಗದಲ್ಲಿ ಬೋರ್ಡ್ ಹಾಕಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಬರುವವರು ಫೋಟೋ ತೆಗೆದುಕೊಳ್ಳಲು ಮುಂದಾಗುತ್ತಾರೆ. ಇದರಿಂದ ಸಿಎಂ ಅವರ ಬೇರೆ ಕೆಲಸಗಳಿಗೆ ಅಡ್ಡಿಯಾಗುವ ಹಿನ್ನೆಲೆಯಲ್ಲಿ ಮೊಬೈಲ್ ನಿಷೇಧಿಸಲಾಗಿದೆ ಎಂದು ಹೇಳಲಾಗಿದೆ.